5:55 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ

05/09/2023, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ.


ಎರಡು ವರ್ಷಗಳಿಂದ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಕಲ್ ನಿಡುವಳೆ ಗ್ರಾಮದ 70ಕ್ಕೂ ಹೆಚ್ಚು ಗ್ರಾಮಸ್ಥರು 94 ಸಿಯಲ್ಲಿ ಅರ್ಜಿ ಸಲ್ಲಿಸಿದ್ದು ಅದರಲ್ಲಿ 30 ಜನರು ಸರ್ಕಾರಕ್ಕೆ ಹಣವನ್ನು ಪಾವತಿ ಮಾಡಿದ್ದಾರೆ. ಆದರೆ ಮೂಡಿಗೆರೆ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದು ಇದರಿಂದ ಬೇಸತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿಯವರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಗ್ರಾಮ ಪಂಚಾಯತಿ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದು 94 ಸಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ. ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇದರಿಂದ ಖುದ್ದಾಗಿ ನಾನೇ ಬಂದರು ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಅದರಿಂದ ಬೇಸತ್ತು ಮೌನ ಪ್ರತಿಭಟನೆ ಮಾಡುತ್ತಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು