ಇತ್ತೀಚಿನ ಸುದ್ದಿ
ಹಾಸನದ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ ಬಾಗಿಲು ಇಂದು ಓಪನ್: ಏನಿದರ ವಿಶೇಷ?
November 5, 2020, 8:01 AM

ಹಾಸನ(reporterkarnataka news): ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಸ್ಥಾನದ ಬಾಗಿಲು ಇಂದು ತೆರೆಯಲಿದೆ. ಕೊರೋನಾ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅತೀ ಗಣ್ಯ ವ್ಯಕ್ತಿಗಳಿಗೆ ಮಾತ್ರ ಸೀಮಿತ ಸಂಖ್ಯೆಯಲ್ಲಿ ದರ್ಶನಕ್ಕೆ ಅನುಮತಿ ನೀಡಲಾಗಿದೆ.
ಜಿಲ್ಲಾಡಳಿತದ ಈ ಕ್ರಮಕ್ಕೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಕಿಡಿ ಕಾರಿದ್ದಾರೆ.