6:33 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ

30/12/2024, 15:26

*ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು*

*31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ*

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷದ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಾತರದಿಂದ ಕಾಯುತ್ತಿದ್ದು, ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿ ಪ್ರಕಾರ ಡಿ. 31ರ ಸಂಜೆ 6ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿ ತಾಣಗಳು ಕೂಡ ನಿರ್ಬಂಧದಲ್ಲಿ ಸೇರಿವೆ.
ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ.
ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು.
ಆದಾಯಕ್ಕಾಗಿ ಇದೇ ಮೊದಲ ಬಾರಿಗೆ ಸಿ.ಎಲ್. 5 ಗೆ ಅನುಮತಿ ಸರ್ಕಾರ ನೀಡಿದೆ.
ಒಂದು ದಿನದ ಅನುಮತಿಗೆ 12000 ಸಾವಿರ ನಿಗಧಿ ಮಾಡಿದೆ. ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಾಗುವುದು.
ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು ಇರಿಸಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು