3:13 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ

30/12/2024, 15:26

*ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು*

*31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ*

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷದ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಾತರದಿಂದ ಕಾಯುತ್ತಿದ್ದು, ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿ ಪ್ರಕಾರ ಡಿ. 31ರ ಸಂಜೆ 6ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿ ತಾಣಗಳು ಕೂಡ ನಿರ್ಬಂಧದಲ್ಲಿ ಸೇರಿವೆ.
ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ.
ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು.
ಆದಾಯಕ್ಕಾಗಿ ಇದೇ ಮೊದಲ ಬಾರಿಗೆ ಸಿ.ಎಲ್. 5 ಗೆ ಅನುಮತಿ ಸರ್ಕಾರ ನೀಡಿದೆ.
ಒಂದು ದಿನದ ಅನುಮತಿಗೆ 12000 ಸಾವಿರ ನಿಗಧಿ ಮಾಡಿದೆ. ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಾಗುವುದು.
ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು ಇರಿಸಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು