5:21 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ

30/12/2024, 15:26

*ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು*

*31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ*

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷದ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಾತರದಿಂದ ಕಾಯುತ್ತಿದ್ದು, ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿ ಪ್ರಕಾರ ಡಿ. 31ರ ಸಂಜೆ 6ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿ ತಾಣಗಳು ಕೂಡ ನಿರ್ಬಂಧದಲ್ಲಿ ಸೇರಿವೆ.
ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ.
ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು.
ಆದಾಯಕ್ಕಾಗಿ ಇದೇ ಮೊದಲ ಬಾರಿಗೆ ಸಿ.ಎಲ್. 5 ಗೆ ಅನುಮತಿ ಸರ್ಕಾರ ನೀಡಿದೆ.
ಒಂದು ದಿನದ ಅನುಮತಿಗೆ 12000 ಸಾವಿರ ನಿಗಧಿ ಮಾಡಿದೆ. ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಾಗುವುದು.
ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು ಇರಿಸಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು