10:23 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ

30/12/2024, 15:26

*ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು*

*31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ*

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷದ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಾತರದಿಂದ ಕಾಯುತ್ತಿದ್ದು, ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿ ಪ್ರಕಾರ ಡಿ. 31ರ ಸಂಜೆ 6ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿ ತಾಣಗಳು ಕೂಡ ನಿರ್ಬಂಧದಲ್ಲಿ ಸೇರಿವೆ.
ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ.
ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು.
ಆದಾಯಕ್ಕಾಗಿ ಇದೇ ಮೊದಲ ಬಾರಿಗೆ ಸಿ.ಎಲ್. 5 ಗೆ ಅನುಮತಿ ಸರ್ಕಾರ ನೀಡಿದೆ.
ಒಂದು ದಿನದ ಅನುಮತಿಗೆ 12000 ಸಾವಿರ ನಿಗಧಿ ಮಾಡಿದೆ. ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಾಗುವುದು.
ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು ಇರಿಸಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು