9:27 PM Friday22 - May 2026
ಬ್ರೇಕಿಂಗ್ ನ್ಯೂಸ್
ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ

ಇತ್ತೀಚಿನ ಸುದ್ದಿ

ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ

30/12/2024, 15:26

*ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು*

*31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ*

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷದ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಾತರದಿಂದ ಕಾಯುತ್ತಿದ್ದು, ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿ ಪ್ರಕಾರ ಡಿ. 31ರ ಸಂಜೆ 6ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿ ತಾಣಗಳು ಕೂಡ ನಿರ್ಬಂಧದಲ್ಲಿ ಸೇರಿವೆ.
ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ.
ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು.
ಆದಾಯಕ್ಕಾಗಿ ಇದೇ ಮೊದಲ ಬಾರಿಗೆ ಸಿ.ಎಲ್. 5 ಗೆ ಅನುಮತಿ ಸರ್ಕಾರ ನೀಡಿದೆ.
ಒಂದು ದಿನದ ಅನುಮತಿಗೆ 12000 ಸಾವಿರ ನಿಗಧಿ ಮಾಡಿದೆ. ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಾಗುವುದು.
ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು ಇರಿಸಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು