10:09 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ

30/12/2024, 15:26

*ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು*

*31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ*

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷದ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಾತರದಿಂದ ಕಾಯುತ್ತಿದ್ದು, ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿ ಪ್ರಕಾರ ಡಿ. 31ರ ಸಂಜೆ 6ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿ ತಾಣಗಳು ಕೂಡ ನಿರ್ಬಂಧದಲ್ಲಿ ಸೇರಿವೆ.
ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ.
ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು.
ಆದಾಯಕ್ಕಾಗಿ ಇದೇ ಮೊದಲ ಬಾರಿಗೆ ಸಿ.ಎಲ್. 5 ಗೆ ಅನುಮತಿ ಸರ್ಕಾರ ನೀಡಿದೆ.
ಒಂದು ದಿನದ ಅನುಮತಿಗೆ 12000 ಸಾವಿರ ನಿಗಧಿ ಮಾಡಿದೆ. ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಾಗುವುದು.
ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು ಇರಿಸಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು