9:39 AM Saturday19 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ

30/12/2024, 15:26

*ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು*

*31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ*

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷದ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಾತರದಿಂದ ಕಾಯುತ್ತಿದ್ದು, ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿ ಪ್ರಕಾರ ಡಿ. 31ರ ಸಂಜೆ 6ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿ ತಾಣಗಳು ಕೂಡ ನಿರ್ಬಂಧದಲ್ಲಿ ಸೇರಿವೆ.
ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ.
ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು.
ಆದಾಯಕ್ಕಾಗಿ ಇದೇ ಮೊದಲ ಬಾರಿಗೆ ಸಿ.ಎಲ್. 5 ಗೆ ಅನುಮತಿ ಸರ್ಕಾರ ನೀಡಿದೆ.
ಒಂದು ದಿನದ ಅನುಮತಿಗೆ 12000 ಸಾವಿರ ನಿಗಧಿ ಮಾಡಿದೆ. ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಾಗುವುದು.
ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು ಇರಿಸಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು