12:34 AM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ

30/12/2024, 15:26

*ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು*

*31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ*

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷದ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಾತರದಿಂದ ಕಾಯುತ್ತಿದ್ದು, ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿ ಪ್ರಕಾರ ಡಿ. 31ರ ಸಂಜೆ 6ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿ ತಾಣಗಳು ಕೂಡ ನಿರ್ಬಂಧದಲ್ಲಿ ಸೇರಿವೆ.
ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ.
ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು.
ಆದಾಯಕ್ಕಾಗಿ ಇದೇ ಮೊದಲ ಬಾರಿಗೆ ಸಿ.ಎಲ್. 5 ಗೆ ಅನುಮತಿ ಸರ್ಕಾರ ನೀಡಿದೆ.
ಒಂದು ದಿನದ ಅನುಮತಿಗೆ 12000 ಸಾವಿರ ನಿಗಧಿ ಮಾಡಿದೆ. ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಾಗುವುದು.
ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು ಇರಿಸಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು