ಇತ್ತೀಚಿನ ಸುದ್ದಿ
ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್
January 26, 2021, 8:27 PM

ಮಂಗಳೂರು(reporterkarnataka news): ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚುತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕಂಬಳ ಕ್ರೀಡೆಯನ್ನು ಜಿಲ್ಲೆಯಲ್ಲಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಂಬಳ ಕರಾವಳಿ ಕರ್ನಾಟಕ ಭಾಗದ ಒಂದು ಜಾನಪದ ಕ್ರೀಡೆಯಾಗಿದ್ದು ಕರಾವಳಿ ಭಾಗದ ರೈತಾಪಿಜನರು ನವೆಂಬರ್- ಡಿಸೆಂಬರ್ ಮಾಸದಲ್ಲಿ ಭತ್ತದ ಕೊಯ್ಲಿನ ನಂತರದಿಂದ ಫೆಬ್ರವರಿ-ಮಾರ್ಚ್ ತಿಂಗಳವರೆಗೆ ತಮ್ಮ ಮನೋರಂಜನೆಗಾಗಿ ಸಾಂಘಿಕ ಬಲದೂಂದಿಗೆ ಕಂಬಳವನ್ನು ನಡೆಸುತ್ತಾರೆ ಎಂದರು. ಕಂಬಳಕ್ಕೆ ನೂರಾರು ವರ್ಷದ ಇತಿಹಾಸವಿದ್ದು ರಾಜಮಹಾರಾಜರುಗಳು ಪ್ರೋತ್ಸಾಹ ನೀಡಿದ್ದಾರೆ ಎಂದ ಅವರು, ಈ ಬಾರಿ ಕೋವಿಡ್ ಸೋಂಕಿನಿಂದಾಗಿ ರೈತರು ಜನವರಿ ಅಂತ್ಯವಾದರೂ ಪ್ರಾರಂಭಿಸಿಲ್ಲ. ಆಯೋಜಕರು ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ ತಪ್ಪದೆ ಪಾಲಿಸುವುದರೊಂದಿಗೆ ಜನವರಿ ಮೂವತ್ತರಿಂದ ಜಿಲ್ಲೆಯಲ್ಲಿ 10 ಕಂಬಳ ಕಾರ್ಯಕ್ರಮವನ್ನು ಏರ್ಪಡಿಸ ಬಹುದಾಗಿದೆ ಎಂದರು .
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಮಾತನಾಡಿ ಕೋವಿಡ್ ಸಂದರ್ಭವಾದ ಈ ದಿನಗಳಲ್ಲಿ ಅತಿ ಹೆಚ್ಚು ಜಾಗ್ರತೆ ವಹಿಸಬೇಕು. ಹೆಚ್ಚು ಜನರು ಸೇರಿದಂತೆ ಕ್ರಮವಹಿಸಬೇಕುರಾತ್ರಿ ಹತ್ತು ಗಂಟೆಯ ಒಳಗಾಗಿ ಕಂಬಳ ಕಾರ್ಯಕ್ರಮವನ್ನು ಪೂರ್ಣಗೊಳಿಸಬೇಕು ಎಂದರು.
ಕಾರ್ಯಕ್ರಮಕ್ಕೆ ವಯಸ್ಸಾದವರು ಮತ್ತು ಮಕ್ಕಳು ಭಾಗವಹಿಸದಂತೆ ಎಚ್ಚರವಹಿಸಬೇಕು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದರು .
ಕಂಬಳ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತ ವಿಧಿಸುವ ಎಲ್ಲಾ ನಿಯಮಗಳನ್ನು ಹಾಗೂ ಎಲ್ಲಾ ಮಾರ್ಗಸೂಚಿಗಳನ್ನು ಶಿಸ್ತುಬದ್ಧವಾಗಿ ಜರಗಿಸಲು ಹೆಚ್ಚಿನ ಕಾರ್ಯಕರ್ತರನ್ನು ತೊಡಗಿಸಿಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್,ಯು.ಟಿ ಖಾದರ್, ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್, ಉಪ ಪೊಲೀಸ್ ಆಯುಕ್ತ ವಿನಯ್ ಗಾವಂಕರ್,ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಟಿ.ಜಿ. ಪ್ರಸನ್ನ ಹಾಗೂ ಕಂಬಳ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು .