6:44 PM Friday5 - December 2025
ಬ್ರೇಕಿಂಗ್ ನ್ಯೂಸ್
New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ

ಇತ್ತೀಚಿನ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಹಿಮಕುಸಿತದ ಭೀತಿ: ಹವಾಮಾನ ಇಲಾಖೆ ಎಚ್ಚರಿಕೆ

06/01/2022, 18:54

ಶ್ರೀನಗರ(reporterkarnataka.com):
ಜಮ್ಮು ಮತ್ತು ಕಾಶ್ಮೀರ ಹಿಮಾವೃತವಾಗಿದ್ದು, ಹಿಮಕುಸಿತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜನವರಿ 8ರವರೆಗೆ ಹಿಮ ಬೀಳುವ ನಿರೀಕ್ಷೆ ಇದೆ. ಜಮ್ಮು ಕಾಶ್ಮೀರದ ಎತ್ತರದ ಪ್ರದೇಶಗಳಲ್ಲಿ ಮಧ್ಯಮದಿಂದ ಭಾರೀ ಹಿಮಪಾತ ಆಗುತ್ತಿದ್ದು, ಹಿಮಕುಸಿತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಹೆಚ್ಚು ಹಿಮ ಬೀಳುತ್ತಿರುವ ಪ್ರದೇಶಗಳಿಗೆ ಹೋಗುವುದನ್ನು ನಿಲ್ಲಿಸುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹೋದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಮದಿಂದಾಗಿ ಜನರ ಓಡಾಟಕ್ಕೆ ತೊಂದರೆಯಾಗಿದ್ದು, ವಸ್ತುಗಳನ್ನು ಸಾಗಿಸುವುದು ಕಷ್ಟವಾಗಿದೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಲವು ರಸ್ತೆಗಳ ಮೇಲೆ ಬೆಟ್ಟಗಳಿಂದ ಕಲ್ಲು, ಮಣ್ಣು ಕುಸಿದಿದ್ದು, ಸಂಚಾರ ಅಸಾಧ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು