8:05 AM Thursday18 - April 2024
ಬ್ರೇಕಿಂಗ್ ನ್ಯೂಸ್
ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ…

ಇತ್ತೀಚಿನ ಸುದ್ದಿ

ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು, ಮಂಡಳಿಯಾಗಿಸಲು ಸರಕಾರ ಚಿಂತನೆ: ಸಚಿವ ಡಿ. ಸುಧಾಕರ್

01/07/2023, 23:37

ಮಂಗಳೂರು(reporterkarnataka.com): ಮುಂಬರುವ ದಿನಗಳಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪರಿವರ್ತಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ. ಸುಧಾಕರ್ ಹೇಳಿದರು.
ಅವರು ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಮಂಡಳಿಯನ್ನಾಗಿ ಪರಿವರ್ತಿಸುವ ಸಂಬಂಧ ಈಗಾಗಲೇ ಚರ್ಚೆ ನಡೆಸಲಾಗಿದೆ, ಅದನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ, ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪುನರ್ ನಾಮಕರಣ ಮಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ರಾಜ್ಯದ ಕರಾವಳಿ ಪ್ರದೇಶಗಳ ಅಭಿವೃದ್ದಿಗೆ ಸರ್ಕಾರ ಕಟಿಬದ್ಧವಾಗಿದೆ, ನಿರ್ಲಕ್ಷ್ಯಕ್ಕೊಳಪಟ್ಟ ಪ್ರದೇಶಗಳನ್ನು ಗುರುತಿಸಿ, ಅಭಿವೃದ್ಧಿ ಪಡಿಸಲು ಹೆಚ್ಚಿನ ಒತ್ತು ನೀಡಲಾಗುವುದು, ಈ ವಿಚಾರದಲ್ಲಿ ಮೂರು ಜಿಲ್ಲೆಗಳ ಶಾಸಕರು ಹಾಗೂ ವಿಧಾನ ಪರಿಷತ್ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ಅವರು ತಿಳಿಸುವ ಪ್ರದೇಶಗಳಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಿಡುಗಡೆ ಮಾಡುವ ಅನುದಾನವನ್ನು ಅಗತ್ಯವಿರುವ ಕಡೆ ಆದ್ಯತೆ ಮೇರೆಗೆ ಬಳಸಿಕೊಳ್ಳಬೇಕು, ಅದನ್ನು ಇತರೆ ಕಾಮಗಾರಿಗಳಿಗೆ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತೂಗು ಸೇತುವೆ, ಕಾಲುಸಂಕ, ಶಾಲಾ ಕಟ್ಟಡ ಅಭಿವೃದ್ಧಿ, ಮೀನು ಮಾರುಕಟ್ಟೆ ನಿರ್ಮಾಣ, ಒಣ ಮೀನು ಸಂಸ್ಕರಣೆಗೆ ಮಹಿಳೆಯರಿಗೆ ಅಗತ್ಯ ತರಬೇತಿ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುವುದೆಂದು ಸಚಿವರು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರು ಮಾತನಾಡಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನವನ್ನು ಹೇಗೆ ಯಾವ ರೀತಿಯಲ್ಲಿ ಬಳಸಬೇಕು ಎಂಬುವುದರ ಬಗ್ಗೆ ಸೂಕ್ತ ರೂಪರೇμÉಗಳನ್ನು ಒಳಗೊಂಡ ಮಾರ್ಗದರ್ಶನದ ಅವಶ್ಯಕತೆ ಇದ್ದು, ಈ ಸಂಬಂಧ ಆದೇಶ ಹೊರಡಿಸುವಂತೆ ಸಚಿವರಲ್ಲಿ ಮನವಿ ಮಾಡಿದರು
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜಾ, ಮೂರು ಜಿಲ್ಲೆಗಳಲ್ಲಿ ಸ್ಥಳೀಯ ಬೇಡಿಕೆ ಹಾಗೂ ಅಗತ್ಯತೆ ಅಗತ್ಯತೆಗೆ ಅನುಗುಣವಾಗಿ ಹಲವು ವಿಭಿನ್ನ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು