12:42 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು