8:14 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು