1:31 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು