6:03 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು