4:45 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು