7:54 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು