10:32 AM Wednesday2 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು