9:11 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು