12:02 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ 

14/09/2021, 12:09

ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರೂಪ ಶ್ರೀನಿವಾಸ್ ನಾಯಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಕ್ಕೆ ಬಡವರಿಗೆ ಬಗ್ಗೆ ಕಾಳಜಿ ಇಲ್ಲ. ಪ್ರತಿಯೊಂದು ಬೆಲೆಯು ಗಗನಕ್ಕೇರುತ್ತಿದ್ದು, ಬಡ ಕುಟುಂಬಗಳು ಬದುಕಲು ಕಷ್ಟವಾಗುತ್ತಿದೆ ಎಂದರು.

ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್ ಮಾತನಾಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳನ್ನು ವಾಪಸ್ ಪಡೆಯಬೇಕೆಂದು ಹೋರಾಟ ನಡೆಸಿದರು.ಕರ್ನಾಟಕ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಬದುಕಲು ಕಷ್ಟವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಕಣ್ಣು-ಕಿವಿ ಇಲ್ಲವೇ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಅನಿತಾ ಮಂತ್ರಿ ಸೇರಿದಂತೆ ಈ ಸಂದರ್ಭದಲ್ಲಿ ಮರ್ಲಿಂಗ ಪಾಟೀಲ್, ಕೃಷ್ಣಪ್ಪ ,ರಂಗಪ್ಪ, ಶರಣಪ್ಪ ನಿಂಗಪ್ಪ ಇನ್ನಿತರ ಕಾರ್ಯಕ್ರಮ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು