12:28 AM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ 

14/09/2021, 12:09

ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರೂಪ ಶ್ರೀನಿವಾಸ್ ನಾಯಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಕ್ಕೆ ಬಡವರಿಗೆ ಬಗ್ಗೆ ಕಾಳಜಿ ಇಲ್ಲ. ಪ್ರತಿಯೊಂದು ಬೆಲೆಯು ಗಗನಕ್ಕೇರುತ್ತಿದ್ದು, ಬಡ ಕುಟುಂಬಗಳು ಬದುಕಲು ಕಷ್ಟವಾಗುತ್ತಿದೆ ಎಂದರು.

ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್ ಮಾತನಾಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳನ್ನು ವಾಪಸ್ ಪಡೆಯಬೇಕೆಂದು ಹೋರಾಟ ನಡೆಸಿದರು.ಕರ್ನಾಟಕ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಬದುಕಲು ಕಷ್ಟವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಕಣ್ಣು-ಕಿವಿ ಇಲ್ಲವೇ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಅನಿತಾ ಮಂತ್ರಿ ಸೇರಿದಂತೆ ಈ ಸಂದರ್ಭದಲ್ಲಿ ಮರ್ಲಿಂಗ ಪಾಟೀಲ್, ಕೃಷ್ಣಪ್ಪ ,ರಂಗಪ್ಪ, ಶರಣಪ್ಪ ನಿಂಗಪ್ಪ ಇನ್ನಿತರ ಕಾರ್ಯಕ್ರಮ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು