2:46 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ 

14/09/2021, 12:09

ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರೂಪ ಶ್ರೀನಿವಾಸ್ ನಾಯಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಕ್ಕೆ ಬಡವರಿಗೆ ಬಗ್ಗೆ ಕಾಳಜಿ ಇಲ್ಲ. ಪ್ರತಿಯೊಂದು ಬೆಲೆಯು ಗಗನಕ್ಕೇರುತ್ತಿದ್ದು, ಬಡ ಕುಟುಂಬಗಳು ಬದುಕಲು ಕಷ್ಟವಾಗುತ್ತಿದೆ ಎಂದರು.

ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್ ಮಾತನಾಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳನ್ನು ವಾಪಸ್ ಪಡೆಯಬೇಕೆಂದು ಹೋರಾಟ ನಡೆಸಿದರು.ಕರ್ನಾಟಕ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಬದುಕಲು ಕಷ್ಟವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಕಣ್ಣು-ಕಿವಿ ಇಲ್ಲವೇ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಅನಿತಾ ಮಂತ್ರಿ ಸೇರಿದಂತೆ ಈ ಸಂದರ್ಭದಲ್ಲಿ ಮರ್ಲಿಂಗ ಪಾಟೀಲ್, ಕೃಷ್ಣಪ್ಪ ,ರಂಗಪ್ಪ, ಶರಣಪ್ಪ ನಿಂಗಪ್ಪ ಇನ್ನಿತರ ಕಾರ್ಯಕ್ರಮ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು