2:04 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ 

14/09/2021, 12:09

ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರೂಪ ಶ್ರೀನಿವಾಸ್ ನಾಯಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಕ್ಕೆ ಬಡವರಿಗೆ ಬಗ್ಗೆ ಕಾಳಜಿ ಇಲ್ಲ. ಪ್ರತಿಯೊಂದು ಬೆಲೆಯು ಗಗನಕ್ಕೇರುತ್ತಿದ್ದು, ಬಡ ಕುಟುಂಬಗಳು ಬದುಕಲು ಕಷ್ಟವಾಗುತ್ತಿದೆ ಎಂದರು.

ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್ ಮಾತನಾಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳನ್ನು ವಾಪಸ್ ಪಡೆಯಬೇಕೆಂದು ಹೋರಾಟ ನಡೆಸಿದರು.ಕರ್ನಾಟಕ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಬದುಕಲು ಕಷ್ಟವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಕಣ್ಣು-ಕಿವಿ ಇಲ್ಲವೇ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಅನಿತಾ ಮಂತ್ರಿ ಸೇರಿದಂತೆ ಈ ಸಂದರ್ಭದಲ್ಲಿ ಮರ್ಲಿಂಗ ಪಾಟೀಲ್, ಕೃಷ್ಣಪ್ಪ ,ರಂಗಪ್ಪ, ಶರಣಪ್ಪ ನಿಂಗಪ್ಪ ಇನ್ನಿತರ ಕಾರ್ಯಕ್ರಮ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು