4:29 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ 

14/09/2021, 12:09

ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರೂಪ ಶ್ರೀನಿವಾಸ್ ನಾಯಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಕ್ಕೆ ಬಡವರಿಗೆ ಬಗ್ಗೆ ಕಾಳಜಿ ಇಲ್ಲ. ಪ್ರತಿಯೊಂದು ಬೆಲೆಯು ಗಗನಕ್ಕೇರುತ್ತಿದ್ದು, ಬಡ ಕುಟುಂಬಗಳು ಬದುಕಲು ಕಷ್ಟವಾಗುತ್ತಿದೆ ಎಂದರು.

ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್ ಮಾತನಾಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳನ್ನು ವಾಪಸ್ ಪಡೆಯಬೇಕೆಂದು ಹೋರಾಟ ನಡೆಸಿದರು.ಕರ್ನಾಟಕ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಬದುಕಲು ಕಷ್ಟವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಕಣ್ಣು-ಕಿವಿ ಇಲ್ಲವೇ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಅನಿತಾ ಮಂತ್ರಿ ಸೇರಿದಂತೆ ಈ ಸಂದರ್ಭದಲ್ಲಿ ಮರ್ಲಿಂಗ ಪಾಟೀಲ್, ಕೃಷ್ಣಪ್ಪ ,ರಂಗಪ್ಪ, ಶರಣಪ್ಪ ನಿಂಗಪ್ಪ ಇನ್ನಿತರ ಕಾರ್ಯಕ್ರಮ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು