4:41 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ 

14/09/2021, 12:09

ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರೂಪ ಶ್ರೀನಿವಾಸ್ ನಾಯಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಕ್ಕೆ ಬಡವರಿಗೆ ಬಗ್ಗೆ ಕಾಳಜಿ ಇಲ್ಲ. ಪ್ರತಿಯೊಂದು ಬೆಲೆಯು ಗಗನಕ್ಕೇರುತ್ತಿದ್ದು, ಬಡ ಕುಟುಂಬಗಳು ಬದುಕಲು ಕಷ್ಟವಾಗುತ್ತಿದೆ ಎಂದರು.

ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್ ಮಾತನಾಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳನ್ನು ವಾಪಸ್ ಪಡೆಯಬೇಕೆಂದು ಹೋರಾಟ ನಡೆಸಿದರು.ಕರ್ನಾಟಕ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಬದುಕಲು ಕಷ್ಟವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಕಣ್ಣು-ಕಿವಿ ಇಲ್ಲವೇ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಅನಿತಾ ಮಂತ್ರಿ ಸೇರಿದಂತೆ ಈ ಸಂದರ್ಭದಲ್ಲಿ ಮರ್ಲಿಂಗ ಪಾಟೀಲ್, ಕೃಷ್ಣಪ್ಪ ,ರಂಗಪ್ಪ, ಶರಣಪ್ಪ ನಿಂಗಪ್ಪ ಇನ್ನಿತರ ಕಾರ್ಯಕ್ರಮ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು