7:42 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ 

14/09/2021, 12:09

ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರೂಪ ಶ್ರೀನಿವಾಸ್ ನಾಯಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಕ್ಕೆ ಬಡವರಿಗೆ ಬಗ್ಗೆ ಕಾಳಜಿ ಇಲ್ಲ. ಪ್ರತಿಯೊಂದು ಬೆಲೆಯು ಗಗನಕ್ಕೇರುತ್ತಿದ್ದು, ಬಡ ಕುಟುಂಬಗಳು ಬದುಕಲು ಕಷ್ಟವಾಗುತ್ತಿದೆ ಎಂದರು.

ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್ ಮಾತನಾಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳನ್ನು ವಾಪಸ್ ಪಡೆಯಬೇಕೆಂದು ಹೋರಾಟ ನಡೆಸಿದರು.ಕರ್ನಾಟಕ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಬದುಕಲು ಕಷ್ಟವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಕಣ್ಣು-ಕಿವಿ ಇಲ್ಲವೇ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಅನಿತಾ ಮಂತ್ರಿ ಸೇರಿದಂತೆ ಈ ಸಂದರ್ಭದಲ್ಲಿ ಮರ್ಲಿಂಗ ಪಾಟೀಲ್, ಕೃಷ್ಣಪ್ಪ ,ರಂಗಪ್ಪ, ಶರಣಪ್ಪ ನಿಂಗಪ್ಪ ಇನ್ನಿತರ ಕಾರ್ಯಕ್ರಮ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು