1:24 AM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ 

14/09/2021, 12:09

ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರೂಪ ಶ್ರೀನಿವಾಸ್ ನಾಯಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಕ್ಕೆ ಬಡವರಿಗೆ ಬಗ್ಗೆ ಕಾಳಜಿ ಇಲ್ಲ. ಪ್ರತಿಯೊಂದು ಬೆಲೆಯು ಗಗನಕ್ಕೇರುತ್ತಿದ್ದು, ಬಡ ಕುಟುಂಬಗಳು ಬದುಕಲು ಕಷ್ಟವಾಗುತ್ತಿದೆ ಎಂದರು.

ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್ ಮಾತನಾಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳನ್ನು ವಾಪಸ್ ಪಡೆಯಬೇಕೆಂದು ಹೋರಾಟ ನಡೆಸಿದರು.ಕರ್ನಾಟಕ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಬದುಕಲು ಕಷ್ಟವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಕಣ್ಣು-ಕಿವಿ ಇಲ್ಲವೇ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಅನಿತಾ ಮಂತ್ರಿ ಸೇರಿದಂತೆ ಈ ಸಂದರ್ಭದಲ್ಲಿ ಮರ್ಲಿಂಗ ಪಾಟೀಲ್, ಕೃಷ್ಣಪ್ಪ ,ರಂಗಪ್ಪ, ಶರಣಪ್ಪ ನಿಂಗಪ್ಪ ಇನ್ನಿತರ ಕಾರ್ಯಕ್ರಮ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು