5:21 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

07/01/2023, 19:55

ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.

2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ‌. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು