10:45 AM Thursday27 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

07/01/2023, 19:55

ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.

2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ‌. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು