5:36 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

07/01/2023, 19:55

ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.

2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ‌. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು