2:32 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

07/01/2023, 19:55

ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.

2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ‌. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು