7:12 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

07/01/2023, 19:55

ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.

2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ‌. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು