2:33 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

07/01/2023, 19:55

ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.

2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ‌. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು