3:07 PM Friday20 - February 2026
ಬ್ರೇಕಿಂಗ್ ನ್ಯೂಸ್
ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8…

ಇತ್ತೀಚಿನ ಸುದ್ದಿ

ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

07/01/2023, 19:55

ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.

2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ‌. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು