12:09 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

07/01/2023, 19:55

ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.

2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ‌. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು