ಇತ್ತೀಚಿನ ಸುದ್ದಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜುಲೈ 5ರಂದು ಮಂಗಳೂರಿಗೆ: ಮೀನುಗಾರರ ಜತೆ ಸಭೆ
04/07/2021, 09:14
ಮಂಗಳೂರು(reporterkarnataka news); ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜು.5 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 1.45ಕ್ಕೆ ಡಿಕೆಶಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವರು. ಬಳಿಕ ಅವರು ಮಧ್ಯಾಹ್ನ 2.30ಕ್ಕೆ ಸುಲ್ತಾನ್ ಬತ್ತೇರಿಯ ಬೋಳೂರು ಮೊಗವೀರರ ಸಭಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೊಗವೀರರ ಕುಂದುಕೊರತೆಗಳ ಅಧ್ಯಯನ ಸಭೆಯಲ್ಲಿ ಭಾಗವಹಿಸಲಿರುವರು. ನಂತರ ಸಂಜೆ 5:30 ಗಂಟೆಗೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕೋವಿಡ್ ಸಹಾಯ ಹಸ್ತದ ಬಗ್ಗೆ ದ.ಕ. ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಜತೆ ಸಭೆ ನಡೆಸಲಿರುವರು.