11:25 AM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು, ನಮ್ಮ ಸರ್ಕಾರ ಶೇ.15ರಷ್ಟು ಮಾತ್ರ ಮಾಡಿದೆ: ಮುಖ್ಯಮಂತ್ರಿ

17/03/2025, 20:13

ಬೆಂಗಳೂರು(reporterkarnataka.com): ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ .
ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಲಾಗಿದೆ. ಇವರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಸಕ ಡಾ. ಭರತ್ ಶೆಟ್ಟಿ ರಾಹುಲ್ ಗಾಂಧಿ ಯವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದರು. ಇದೇ ದ್ವೇಷದ ರಾಜಕಾರಣ. ಇದನ್ನು ಮಾಡಬಾರದು. ಇದನ್ನು ಹುಟ್ಟುಹಾಕಿದ್ದು ಆರ್.ಎಸ್.ಎಸ್ ನವರು ಎಂದದ್ದಕ್ಕೆ ಗಲಾಟೆ ನೀವು ಮಾಡಿದಿರಿ ಎಂದ ಸಿದ್ದರಾಮಯ್ಯ ಅವರು,
ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಅಂಕಿ ಅಂಶಗಳನ್ನು ಇಟ್ಟು ಸ್ಪಷ್ಟಪಡಿಸಿದರು.
ಅಪರಾಧಗಳಿಲ್ಲವೇ ಇಲ್ಲ ಎಂದು ಹೇಳಲ್ಲ. ಆದರೆ ಕಡಿಮೆಯಾಗಿವೆ ಎಂದರು.
ಹಾಲಿನ ದರದ ಏರಿಕೆ ಬಗ್ಗೆ ಮಾತನಾಡಿದ ಸಿಎಂ, 600 ಕೋಟಿ ರೂ ಉಳಿಸಿ ಹೋದವರು ನೀವು ಬಿಜೆಪಿ ಯವರು. ಆದರೆ ನಾವು ಈ ವರ್ಷ 1500 ಕೋಟಿ ಕೊಟ್ಟಿದ್ದು, ಮುಂದಿನ ವರ್ಷ 1500 ಕೋಟಿ ಮೀಸಲಿಟ್ಟಿದೆ.
ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಹೆಚ್ಚು ಮಾಡಲಾಗಿದೆ. 341 ಕೋಟಿ ರೂಪಾಯಿ ಇದ್ದದ್ದು, 1300 ಕೋಟಿ ಹೆಚ್ಚಾಗಿದೆ. ಈ ಪ್ರಗತಿಗೆ ನಮ್ಮ ಸರ್ಕಾರ ಕಾರಣ ಎಂದರು.
ವಿರೋಧ ಪಕ್ಷದ ನಾಯಕರು ಬಸ್ಸಿನ ದರ ಏರಿಕೆ ಬಗ್ಗೆ ಮಾತನಾಡಿದ್ದಾರೆ. 2008-2013 ವರೆಗೆ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಶೇ 47% ರಷ್ಟು ದರ ಏರಿಸಿದ್ದರು. ನಾವು ಬಸ್ಸಿನ ದರ ಶೇ 15% ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಸಿಬ್ಬಂದಿ ವೇತನ, ಡೀಸಲ್ ಬೆಲೆ ಏರಿಕೆಯಾದ ಕಾರಣಕ್ಕೆ ನಾವು ಬಸ್ಸಿನ ದರ ಹೆಚ್ಚಳ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು