9:30 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು, ನಮ್ಮ ಸರ್ಕಾರ ಶೇ.15ರಷ್ಟು ಮಾತ್ರ ಮಾಡಿದೆ: ಮುಖ್ಯಮಂತ್ರಿ

17/03/2025, 20:13

ಬೆಂಗಳೂರು(reporterkarnataka.com): ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ .
ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಲಾಗಿದೆ. ಇವರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಸಕ ಡಾ. ಭರತ್ ಶೆಟ್ಟಿ ರಾಹುಲ್ ಗಾಂಧಿ ಯವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದರು. ಇದೇ ದ್ವೇಷದ ರಾಜಕಾರಣ. ಇದನ್ನು ಮಾಡಬಾರದು. ಇದನ್ನು ಹುಟ್ಟುಹಾಕಿದ್ದು ಆರ್.ಎಸ್.ಎಸ್ ನವರು ಎಂದದ್ದಕ್ಕೆ ಗಲಾಟೆ ನೀವು ಮಾಡಿದಿರಿ ಎಂದ ಸಿದ್ದರಾಮಯ್ಯ ಅವರು,
ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಅಂಕಿ ಅಂಶಗಳನ್ನು ಇಟ್ಟು ಸ್ಪಷ್ಟಪಡಿಸಿದರು.
ಅಪರಾಧಗಳಿಲ್ಲವೇ ಇಲ್ಲ ಎಂದು ಹೇಳಲ್ಲ. ಆದರೆ ಕಡಿಮೆಯಾಗಿವೆ ಎಂದರು.
ಹಾಲಿನ ದರದ ಏರಿಕೆ ಬಗ್ಗೆ ಮಾತನಾಡಿದ ಸಿಎಂ, 600 ಕೋಟಿ ರೂ ಉಳಿಸಿ ಹೋದವರು ನೀವು ಬಿಜೆಪಿ ಯವರು. ಆದರೆ ನಾವು ಈ ವರ್ಷ 1500 ಕೋಟಿ ಕೊಟ್ಟಿದ್ದು, ಮುಂದಿನ ವರ್ಷ 1500 ಕೋಟಿ ಮೀಸಲಿಟ್ಟಿದೆ.
ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಹೆಚ್ಚು ಮಾಡಲಾಗಿದೆ. 341 ಕೋಟಿ ರೂಪಾಯಿ ಇದ್ದದ್ದು, 1300 ಕೋಟಿ ಹೆಚ್ಚಾಗಿದೆ. ಈ ಪ್ರಗತಿಗೆ ನಮ್ಮ ಸರ್ಕಾರ ಕಾರಣ ಎಂದರು.
ವಿರೋಧ ಪಕ್ಷದ ನಾಯಕರು ಬಸ್ಸಿನ ದರ ಏರಿಕೆ ಬಗ್ಗೆ ಮಾತನಾಡಿದ್ದಾರೆ. 2008-2013 ವರೆಗೆ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಶೇ 47% ರಷ್ಟು ದರ ಏರಿಸಿದ್ದರು. ನಾವು ಬಸ್ಸಿನ ದರ ಶೇ 15% ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಸಿಬ್ಬಂದಿ ವೇತನ, ಡೀಸಲ್ ಬೆಲೆ ಏರಿಕೆಯಾದ ಕಾರಣಕ್ಕೆ ನಾವು ಬಸ್ಸಿನ ದರ ಹೆಚ್ಚಳ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು