5:51 PM Thursday11 - December 2025
ಬ್ರೇಕಿಂಗ್ ನ್ಯೂಸ್
ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ

ಇತ್ತೀಚಿನ ಸುದ್ದಿ

KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು, ನಮ್ಮ ಸರ್ಕಾರ ಶೇ.15ರಷ್ಟು ಮಾತ್ರ ಮಾಡಿದೆ: ಮುಖ್ಯಮಂತ್ರಿ

17/03/2025, 20:13

ಬೆಂಗಳೂರು(reporterkarnataka.com): ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ .
ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಲಾಗಿದೆ. ಇವರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಸಕ ಡಾ. ಭರತ್ ಶೆಟ್ಟಿ ರಾಹುಲ್ ಗಾಂಧಿ ಯವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದರು. ಇದೇ ದ್ವೇಷದ ರಾಜಕಾರಣ. ಇದನ್ನು ಮಾಡಬಾರದು. ಇದನ್ನು ಹುಟ್ಟುಹಾಕಿದ್ದು ಆರ್.ಎಸ್.ಎಸ್ ನವರು ಎಂದದ್ದಕ್ಕೆ ಗಲಾಟೆ ನೀವು ಮಾಡಿದಿರಿ ಎಂದ ಸಿದ್ದರಾಮಯ್ಯ ಅವರು,
ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಅಂಕಿ ಅಂಶಗಳನ್ನು ಇಟ್ಟು ಸ್ಪಷ್ಟಪಡಿಸಿದರು.
ಅಪರಾಧಗಳಿಲ್ಲವೇ ಇಲ್ಲ ಎಂದು ಹೇಳಲ್ಲ. ಆದರೆ ಕಡಿಮೆಯಾಗಿವೆ ಎಂದರು.
ಹಾಲಿನ ದರದ ಏರಿಕೆ ಬಗ್ಗೆ ಮಾತನಾಡಿದ ಸಿಎಂ, 600 ಕೋಟಿ ರೂ ಉಳಿಸಿ ಹೋದವರು ನೀವು ಬಿಜೆಪಿ ಯವರು. ಆದರೆ ನಾವು ಈ ವರ್ಷ 1500 ಕೋಟಿ ಕೊಟ್ಟಿದ್ದು, ಮುಂದಿನ ವರ್ಷ 1500 ಕೋಟಿ ಮೀಸಲಿಟ್ಟಿದೆ.
ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಹೆಚ್ಚು ಮಾಡಲಾಗಿದೆ. 341 ಕೋಟಿ ರೂಪಾಯಿ ಇದ್ದದ್ದು, 1300 ಕೋಟಿ ಹೆಚ್ಚಾಗಿದೆ. ಈ ಪ್ರಗತಿಗೆ ನಮ್ಮ ಸರ್ಕಾರ ಕಾರಣ ಎಂದರು.
ವಿರೋಧ ಪಕ್ಷದ ನಾಯಕರು ಬಸ್ಸಿನ ದರ ಏರಿಕೆ ಬಗ್ಗೆ ಮಾತನಾಡಿದ್ದಾರೆ. 2008-2013 ವರೆಗೆ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಶೇ 47% ರಷ್ಟು ದರ ಏರಿಸಿದ್ದರು. ನಾವು ಬಸ್ಸಿನ ದರ ಶೇ 15% ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಸಿಬ್ಬಂದಿ ವೇತನ, ಡೀಸಲ್ ಬೆಲೆ ಏರಿಕೆಯಾದ ಕಾರಣಕ್ಕೆ ನಾವು ಬಸ್ಸಿನ ದರ ಹೆಚ್ಚಳ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು