2:36 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು, ನಮ್ಮ ಸರ್ಕಾರ ಶೇ.15ರಷ್ಟು ಮಾತ್ರ ಮಾಡಿದೆ: ಮುಖ್ಯಮಂತ್ರಿ

17/03/2025, 20:13

ಬೆಂಗಳೂರು(reporterkarnataka.com): ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ .
ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಲಾಗಿದೆ. ಇವರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಸಕ ಡಾ. ಭರತ್ ಶೆಟ್ಟಿ ರಾಹುಲ್ ಗಾಂಧಿ ಯವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದರು. ಇದೇ ದ್ವೇಷದ ರಾಜಕಾರಣ. ಇದನ್ನು ಮಾಡಬಾರದು. ಇದನ್ನು ಹುಟ್ಟುಹಾಕಿದ್ದು ಆರ್.ಎಸ್.ಎಸ್ ನವರು ಎಂದದ್ದಕ್ಕೆ ಗಲಾಟೆ ನೀವು ಮಾಡಿದಿರಿ ಎಂದ ಸಿದ್ದರಾಮಯ್ಯ ಅವರು,
ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಅಂಕಿ ಅಂಶಗಳನ್ನು ಇಟ್ಟು ಸ್ಪಷ್ಟಪಡಿಸಿದರು.
ಅಪರಾಧಗಳಿಲ್ಲವೇ ಇಲ್ಲ ಎಂದು ಹೇಳಲ್ಲ. ಆದರೆ ಕಡಿಮೆಯಾಗಿವೆ ಎಂದರು.
ಹಾಲಿನ ದರದ ಏರಿಕೆ ಬಗ್ಗೆ ಮಾತನಾಡಿದ ಸಿಎಂ, 600 ಕೋಟಿ ರೂ ಉಳಿಸಿ ಹೋದವರು ನೀವು ಬಿಜೆಪಿ ಯವರು. ಆದರೆ ನಾವು ಈ ವರ್ಷ 1500 ಕೋಟಿ ಕೊಟ್ಟಿದ್ದು, ಮುಂದಿನ ವರ್ಷ 1500 ಕೋಟಿ ಮೀಸಲಿಟ್ಟಿದೆ.
ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಹೆಚ್ಚು ಮಾಡಲಾಗಿದೆ. 341 ಕೋಟಿ ರೂಪಾಯಿ ಇದ್ದದ್ದು, 1300 ಕೋಟಿ ಹೆಚ್ಚಾಗಿದೆ. ಈ ಪ್ರಗತಿಗೆ ನಮ್ಮ ಸರ್ಕಾರ ಕಾರಣ ಎಂದರು.
ವಿರೋಧ ಪಕ್ಷದ ನಾಯಕರು ಬಸ್ಸಿನ ದರ ಏರಿಕೆ ಬಗ್ಗೆ ಮಾತನಾಡಿದ್ದಾರೆ. 2008-2013 ವರೆಗೆ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಶೇ 47% ರಷ್ಟು ದರ ಏರಿಸಿದ್ದರು. ನಾವು ಬಸ್ಸಿನ ದರ ಶೇ 15% ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಸಿಬ್ಬಂದಿ ವೇತನ, ಡೀಸಲ್ ಬೆಲೆ ಏರಿಕೆಯಾದ ಕಾರಣಕ್ಕೆ ನಾವು ಬಸ್ಸಿನ ದರ ಹೆಚ್ಚಳ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು