5:06 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು, ನಮ್ಮ ಸರ್ಕಾರ ಶೇ.15ರಷ್ಟು ಮಾತ್ರ ಮಾಡಿದೆ: ಮುಖ್ಯಮಂತ್ರಿ

17/03/2025, 20:13

ಬೆಂಗಳೂರು(reporterkarnataka.com): ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ .
ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಲಾಗಿದೆ. ಇವರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಸಕ ಡಾ. ಭರತ್ ಶೆಟ್ಟಿ ರಾಹುಲ್ ಗಾಂಧಿ ಯವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದರು. ಇದೇ ದ್ವೇಷದ ರಾಜಕಾರಣ. ಇದನ್ನು ಮಾಡಬಾರದು. ಇದನ್ನು ಹುಟ್ಟುಹಾಕಿದ್ದು ಆರ್.ಎಸ್.ಎಸ್ ನವರು ಎಂದದ್ದಕ್ಕೆ ಗಲಾಟೆ ನೀವು ಮಾಡಿದಿರಿ ಎಂದ ಸಿದ್ದರಾಮಯ್ಯ ಅವರು,
ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಅಂಕಿ ಅಂಶಗಳನ್ನು ಇಟ್ಟು ಸ್ಪಷ್ಟಪಡಿಸಿದರು.
ಅಪರಾಧಗಳಿಲ್ಲವೇ ಇಲ್ಲ ಎಂದು ಹೇಳಲ್ಲ. ಆದರೆ ಕಡಿಮೆಯಾಗಿವೆ ಎಂದರು.
ಹಾಲಿನ ದರದ ಏರಿಕೆ ಬಗ್ಗೆ ಮಾತನಾಡಿದ ಸಿಎಂ, 600 ಕೋಟಿ ರೂ ಉಳಿಸಿ ಹೋದವರು ನೀವು ಬಿಜೆಪಿ ಯವರು. ಆದರೆ ನಾವು ಈ ವರ್ಷ 1500 ಕೋಟಿ ಕೊಟ್ಟಿದ್ದು, ಮುಂದಿನ ವರ್ಷ 1500 ಕೋಟಿ ಮೀಸಲಿಟ್ಟಿದೆ.
ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಹೆಚ್ಚು ಮಾಡಲಾಗಿದೆ. 341 ಕೋಟಿ ರೂಪಾಯಿ ಇದ್ದದ್ದು, 1300 ಕೋಟಿ ಹೆಚ್ಚಾಗಿದೆ. ಈ ಪ್ರಗತಿಗೆ ನಮ್ಮ ಸರ್ಕಾರ ಕಾರಣ ಎಂದರು.
ವಿರೋಧ ಪಕ್ಷದ ನಾಯಕರು ಬಸ್ಸಿನ ದರ ಏರಿಕೆ ಬಗ್ಗೆ ಮಾತನಾಡಿದ್ದಾರೆ. 2008-2013 ವರೆಗೆ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಶೇ 47% ರಷ್ಟು ದರ ಏರಿಸಿದ್ದರು. ನಾವು ಬಸ್ಸಿನ ದರ ಶೇ 15% ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಸಿಬ್ಬಂದಿ ವೇತನ, ಡೀಸಲ್ ಬೆಲೆ ಏರಿಕೆಯಾದ ಕಾರಣಕ್ಕೆ ನಾವು ಬಸ್ಸಿನ ದರ ಹೆಚ್ಚಳ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು