12:47 PM Friday10 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು, ನಮ್ಮ ಸರ್ಕಾರ ಶೇ.15ರಷ್ಟು ಮಾತ್ರ ಮಾಡಿದೆ: ಮುಖ್ಯಮಂತ್ರಿ

17/03/2025, 20:13

ಬೆಂಗಳೂರು(reporterkarnataka.com): ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ .
ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಲಾಗಿದೆ. ಇವರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಸಕ ಡಾ. ಭರತ್ ಶೆಟ್ಟಿ ರಾಹುಲ್ ಗಾಂಧಿ ಯವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದರು. ಇದೇ ದ್ವೇಷದ ರಾಜಕಾರಣ. ಇದನ್ನು ಮಾಡಬಾರದು. ಇದನ್ನು ಹುಟ್ಟುಹಾಕಿದ್ದು ಆರ್.ಎಸ್.ಎಸ್ ನವರು ಎಂದದ್ದಕ್ಕೆ ಗಲಾಟೆ ನೀವು ಮಾಡಿದಿರಿ ಎಂದ ಸಿದ್ದರಾಮಯ್ಯ ಅವರು,
ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಅಂಕಿ ಅಂಶಗಳನ್ನು ಇಟ್ಟು ಸ್ಪಷ್ಟಪಡಿಸಿದರು.
ಅಪರಾಧಗಳಿಲ್ಲವೇ ಇಲ್ಲ ಎಂದು ಹೇಳಲ್ಲ. ಆದರೆ ಕಡಿಮೆಯಾಗಿವೆ ಎಂದರು.
ಹಾಲಿನ ದರದ ಏರಿಕೆ ಬಗ್ಗೆ ಮಾತನಾಡಿದ ಸಿಎಂ, 600 ಕೋಟಿ ರೂ ಉಳಿಸಿ ಹೋದವರು ನೀವು ಬಿಜೆಪಿ ಯವರು. ಆದರೆ ನಾವು ಈ ವರ್ಷ 1500 ಕೋಟಿ ಕೊಟ್ಟಿದ್ದು, ಮುಂದಿನ ವರ್ಷ 1500 ಕೋಟಿ ಮೀಸಲಿಟ್ಟಿದೆ.
ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಹೆಚ್ಚು ಮಾಡಲಾಗಿದೆ. 341 ಕೋಟಿ ರೂಪಾಯಿ ಇದ್ದದ್ದು, 1300 ಕೋಟಿ ಹೆಚ್ಚಾಗಿದೆ. ಈ ಪ್ರಗತಿಗೆ ನಮ್ಮ ಸರ್ಕಾರ ಕಾರಣ ಎಂದರು.
ವಿರೋಧ ಪಕ್ಷದ ನಾಯಕರು ಬಸ್ಸಿನ ದರ ಏರಿಕೆ ಬಗ್ಗೆ ಮಾತನಾಡಿದ್ದಾರೆ. 2008-2013 ವರೆಗೆ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಶೇ 47% ರಷ್ಟು ದರ ಏರಿಸಿದ್ದರು. ನಾವು ಬಸ್ಸಿನ ದರ ಶೇ 15% ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಸಿಬ್ಬಂದಿ ವೇತನ, ಡೀಸಲ್ ಬೆಲೆ ಏರಿಕೆಯಾದ ಕಾರಣಕ್ಕೆ ನಾವು ಬಸ್ಸಿನ ದರ ಹೆಚ್ಚಳ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು