4:28 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು, ನಮ್ಮ ಸರ್ಕಾರ ಶೇ.15ರಷ್ಟು ಮಾತ್ರ ಮಾಡಿದೆ: ಮುಖ್ಯಮಂತ್ರಿ

17/03/2025, 20:13

ಬೆಂಗಳೂರು(reporterkarnataka.com): ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ .
ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಲಾಗಿದೆ. ಇವರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಸಕ ಡಾ. ಭರತ್ ಶೆಟ್ಟಿ ರಾಹುಲ್ ಗಾಂಧಿ ಯವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದರು. ಇದೇ ದ್ವೇಷದ ರಾಜಕಾರಣ. ಇದನ್ನು ಮಾಡಬಾರದು. ಇದನ್ನು ಹುಟ್ಟುಹಾಕಿದ್ದು ಆರ್.ಎಸ್.ಎಸ್ ನವರು ಎಂದದ್ದಕ್ಕೆ ಗಲಾಟೆ ನೀವು ಮಾಡಿದಿರಿ ಎಂದ ಸಿದ್ದರಾಮಯ್ಯ ಅವರು,
ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಅಂಕಿ ಅಂಶಗಳನ್ನು ಇಟ್ಟು ಸ್ಪಷ್ಟಪಡಿಸಿದರು.
ಅಪರಾಧಗಳಿಲ್ಲವೇ ಇಲ್ಲ ಎಂದು ಹೇಳಲ್ಲ. ಆದರೆ ಕಡಿಮೆಯಾಗಿವೆ ಎಂದರು.
ಹಾಲಿನ ದರದ ಏರಿಕೆ ಬಗ್ಗೆ ಮಾತನಾಡಿದ ಸಿಎಂ, 600 ಕೋಟಿ ರೂ ಉಳಿಸಿ ಹೋದವರು ನೀವು ಬಿಜೆಪಿ ಯವರು. ಆದರೆ ನಾವು ಈ ವರ್ಷ 1500 ಕೋಟಿ ಕೊಟ್ಟಿದ್ದು, ಮುಂದಿನ ವರ್ಷ 1500 ಕೋಟಿ ಮೀಸಲಿಟ್ಟಿದೆ.
ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಹೆಚ್ಚು ಮಾಡಲಾಗಿದೆ. 341 ಕೋಟಿ ರೂಪಾಯಿ ಇದ್ದದ್ದು, 1300 ಕೋಟಿ ಹೆಚ್ಚಾಗಿದೆ. ಈ ಪ್ರಗತಿಗೆ ನಮ್ಮ ಸರ್ಕಾರ ಕಾರಣ ಎಂದರು.
ವಿರೋಧ ಪಕ್ಷದ ನಾಯಕರು ಬಸ್ಸಿನ ದರ ಏರಿಕೆ ಬಗ್ಗೆ ಮಾತನಾಡಿದ್ದಾರೆ. 2008-2013 ವರೆಗೆ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಶೇ 47% ರಷ್ಟು ದರ ಏರಿಸಿದ್ದರು. ನಾವು ಬಸ್ಸಿನ ದರ ಶೇ 15% ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಸಿಬ್ಬಂದಿ ವೇತನ, ಡೀಸಲ್ ಬೆಲೆ ಏರಿಕೆಯಾದ ಕಾರಣಕ್ಕೆ ನಾವು ಬಸ್ಸಿನ ದರ ಹೆಚ್ಚಳ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು