10:13 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕುದ್ರೋಳಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

25/01/2025, 22:08

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‌ಬಾಗ್ ಶಾಖೆಯ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಕುದ್ರೋಳಿ ಯುವಕ ಸಂಘ (ರಿ) ಕುದ್ರೋಳಿ, ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮಂಗಳೂರು ಇದರ ನುರಿತ ವೈದರ ತಂಡದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ವನ್ನು ಜ.26ರಂದು ಪೂರ್ವಾಹ್ನ ಸಮಯ 9.30ರಿಂದ ಮಧ್ಯಾಹ್ನ 12.30ರವರೆಗೆ ನಗರದ ಕುದ್ರೋಳಿಯ ಕುದ್ರೋಳಿ ಯುವಕ ಸಂಘದಲ್ಲಿ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ. ಪಿ ತಪಾಸಣೆ , ಜನರಲ್ ವೈದ್ಯಕೀಯ ಸಮಾಲೋಚನೆ, ಇ.ಸಿ.ಜಿ , ಕಿವಿ, ಮೂಗು, ಗಂಟಲು ತಪಾಸಣೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಹಲ್ಲುಗಳನ್ನು ಶುಚಿ ಮಾಡುವುದು, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದೆ.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು