6:51 PM Friday9 - January 2026
ಬ್ರೇಕಿಂಗ್ ನ್ಯೂಸ್
ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು

ಇತ್ತೀಚಿನ ಸುದ್ದಿ

ಕುದ್ರೋಳಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

25/01/2025, 22:08

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‌ಬಾಗ್ ಶಾಖೆಯ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಕುದ್ರೋಳಿ ಯುವಕ ಸಂಘ (ರಿ) ಕುದ್ರೋಳಿ, ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮಂಗಳೂರು ಇದರ ನುರಿತ ವೈದರ ತಂಡದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ವನ್ನು ಜ.26ರಂದು ಪೂರ್ವಾಹ್ನ ಸಮಯ 9.30ರಿಂದ ಮಧ್ಯಾಹ್ನ 12.30ರವರೆಗೆ ನಗರದ ಕುದ್ರೋಳಿಯ ಕುದ್ರೋಳಿ ಯುವಕ ಸಂಘದಲ್ಲಿ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ. ಪಿ ತಪಾಸಣೆ , ಜನರಲ್ ವೈದ್ಯಕೀಯ ಸಮಾಲೋಚನೆ, ಇ.ಸಿ.ಜಿ , ಕಿವಿ, ಮೂಗು, ಗಂಟಲು ತಪಾಸಣೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಹಲ್ಲುಗಳನ್ನು ಶುಚಿ ಮಾಡುವುದು, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದೆ.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು