6:38 AM Thursday8 - January 2026
ಬ್ರೇಕಿಂಗ್ ನ್ಯೂಸ್
ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ…

ಇತ್ತೀಚಿನ ಸುದ್ದಿ

ಕುಕ್ಕೆ ಮಹಾವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿ

25/03/2022, 22:55

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ವಿಕಾಸ ಜನ ಸೇವಾ ಟ್ರಸ್ಟ್ ಕೊಡಗಿನ ಕುಶಾಲನಗರ ತಾಲೂಕು ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. 

ಈ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಎಚ್. ಕೆ. ಆಶ್ರಮದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ದ್ವಿತೀಯ ಹಾಗೂ ತೃತೀಯ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಈ ಅಧ್ಯಯನ ಭೇಟಿಯ ಪ್ರಯೋಜನವನ್ನು ಪಡೆದುಕೊಂಡು ಆಶ್ರಮವಾಸಿಗಳಿಗೆ ಹಣಕಾಸು ಹಣ್ಣು-ಹಂಪಲು ತರಕಾರಿ ಇತ್ಯಾದಿಗಳನ್ನು ನೀಡಿ ಸಹಕರಿಸಿದರು. 


ವಿದ್ಯಾರ್ಥಿಗಳು ಪ್ರಜ್ಞಾ  ಅವರ ನಾಯಕತ್ವದಲ್ಲಿ ಹಲವಾರು ಆಟೋಟ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಶ್ರಮವಾಸಿಗಳಿಗೆ ಏರ್ಪಡಿಸಿದರು. ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ಹಾಗೂ ಉಪನ್ಯಾಸಕಿ ಆರತಿ.ಕೆ ಮಾರ್ಗದರ್ಶನವನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು