3:00 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕೂಳೂರು ನೂತನ ಸೇತುವೆ ಕಾಮಗಾರಿ 3 ವರ್ಷಗಳಿಂದ ನನೆಗುದಿಗೆ: ಸಿಪಿಎಂ ಪ್ರತಿಭಟನೆ

10/03/2023, 20:43

ಮಂಗಳೂರು(reporterkarnataka.com): ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಅಸಮರ್ಥ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಂದು ಸಿಪಿಎಂ ಪಂಜಿಮೊಗರು ವಲಯ ಸಮಿತಿ‌ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತು.


ಪ್ರತಿಭಟನೆ ಉದ್ದೇಶಿಸಿ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ‌. ಇಮ್ತಿಯಾಝ್ ಮಾತನಾಡಿ, ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು‌ ಕಳೆದರೂ ಕೂಡ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು