9:46 AM Friday10 - April 2026
ಬ್ರೇಕಿಂಗ್ ನ್ಯೂಸ್
ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ?

ಇತ್ತೀಚಿನ ಸುದ್ದಿ

ಕೂಳೂರು ನೂತನ ಸೇತುವೆ ಕಾಮಗಾರಿ 3 ವರ್ಷಗಳಿಂದ ನನೆಗುದಿಗೆ: ಸಿಪಿಎಂ ಪ್ರತಿಭಟನೆ

10/03/2023, 20:43

ಮಂಗಳೂರು(reporterkarnataka.com): ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಅಸಮರ್ಥ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಂದು ಸಿಪಿಎಂ ಪಂಜಿಮೊಗರು ವಲಯ ಸಮಿತಿ‌ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತು.


ಪ್ರತಿಭಟನೆ ಉದ್ದೇಶಿಸಿ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ‌. ಇಮ್ತಿಯಾಝ್ ಮಾತನಾಡಿ, ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು‌ ಕಳೆದರೂ ಕೂಡ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು